Friday, March 29, 2024
spot_imgspot_img
spot_imgspot_img

ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ; ಸಚಿವ ಆರಗ ಜ್ಞಾನೇಂದ್ರ

- Advertisement -G L Acharya panikkar
- Advertisement -

ಬೆಂಗಳೂರು : ಯುವತಿ ಮೇಲೆ ಆಸಿಡ್ ದಾಳಿ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಆರೋಪಿ ನಾಗೇಶ್ ನನ್ನು ಬಂಧಿಸಿದ್ದು ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ
ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರು ದಕ್ಷತೆಯಿಂದ ಶ್ರಮ ವಹಿಸಿ ಆರೋಪಿ ನಾಗೇಶ್ ನನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರಿಗೆ ತಮಿಳುನಾಡು ಪೊಲೀಸರು ಸಹಕರಿಸಿದ್ದಾರೆ. ತಮಿಳುನಾಡು ಪೊಲೀಸರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಆಸಿಡ್ ದಾಳಿ ಸಂಬಂಧ ಇಂದು ಫಾಸ್ಟ್ ಟ್ರ್ಯಾಕ್ ಕೋರ್ಟ್ ಪ್ರಕರಣದ ವಿಚಾರಣೆ ನಡೆಯಲಿದೆ. ಆರೋಪಿ ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ. ನಾಗೇಶ್ ನಿಗೆ ಶಿಕ್ಷೆಯಾದರೆ ಸಂತ್ರಸ್ತ ಯುವತಿ ಹಾಗೂ ಕುಟುಂಬಕ್ಕೆ ನೆಮ್ಮದಿ ಸಿಗಲಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಚೇತರಿಸಿಕೊಳ್ಳುತ್ತಿದ್ದು, ಯುವತಿ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸುತ್ತೇನೆ ಎಂದರು.

ಆಸಿಡ್ ದಾಳಿ ಪ್ರಕರಣದ ಆರೋಪಿ ಮೇಲೆ ಫೈರಿಂಗ್

- Advertisement -

Related news

error: Content is protected !!