- Advertisement -
- Advertisement -
ಕೇರಳ ಮೇ ತಿಂಗಳ ಕೊನೆಯಲ್ಲಿ ಮುಂಗಾರ ಪ್ರವೇಶ ಮಾಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಾರುತ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದ್ದು ಮಳೆ ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 5ರಿಂದ 8ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶನಿವಾರದಂದು ಕರಾವಳಿಯ ವಿವಿಧೆಡೆ ಗುಡುಗು ಸಹಿತ ಮಳೆ ಬಂದಿದೆ. ಹಗಲಿನ ವೇಳೆಯಲ್ಲಿ ಮೋಡ, ಬಿಸಿಲಿನ ವಾತಾವರಣ ಈ ಜಿಲ್ಲೆಗಳಲ್ಲಿತ್ತು. ರವಿವಾರ ಮತ್ತು ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
- Advertisement -