ನವದೆಹಲಿ: ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಮಾತನಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಆರ್ಥಿಕ ಸಮೀಕ್ಷೆ 2021-22 ಮಂಡನೆ ಮತ್ತು ನಾಳೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ನಡೆಯಲಿದೆ. ಇದಾದ ನಂತರ, ವಿವಿಧ ಇಲಾಖೆಗಳಿಗೆ ಬಜೆಟ್ ಹಂಚಿಕೆಗಳನ್ನು ಪರಿಶೀಲಿಸಲು ಅವಕಾಶ ನೀಡಲಿದೆ.
ಮತ್ತೇ ಅಧಿವೇಶನವು ಮಾರ್ಚ್ 14 ರಂದು ಪುನರಾರಂಭಗೊಳ್ಳುತ್ತದೆ ಮತ್ತು ಏಪ್ರಿಲ್ 8 ರಂದು ಮುಕ್ತಾಯಗೊಳ್ಳುತ್ತದೆ. ಅಧಿವೇಶನದ ಮೊದಲ ಭಾಗವು 10 ಸಿಟಿಂಗ್ ಹೊಂದಿದ್ದರೆ ಎರಡನೇ ಭಾಗವು 19 ಸಿಟಿಂಗ್ ಹೊಂದಿರಲಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ, ಲೋಕಸಭೆ ಮತ್ತು ರಾಜ್ಯಸಭೆಗಳು ಪ್ರತ್ಯೇಕ ಸಮಯವನ್ನು ಹೊಂದಿರುತ್ತವೆ. ಅಧಿವೇಶನದ ಸಮಯದಲ್ಲಿ, ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಸದಸ್ಯರು ಎರಡೂ ಸದನಗಳಲ್ಲಿ ಕುಳಿತುಕೊಳ್ಳುತ್ತಾರೆ. ಮೇಲ್ಮನೆಯು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಧಿವೇಶನದಲ್ಲಿದ್ದರೆ, ಕೆಳಮನೆಯು ಸಂಜೆ 4 ರಿಂದ ರಾತ್ರಿ 9 ರವರೆಗೆ ಇರುತ್ತದೆ.
ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರು ಅಧಿವೇಶನದ ಸಮಯದಲ್ಲಿ ಸದನಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಸೋಮವಾರ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ.