- Advertisement -
- Advertisement -
ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಬುಧವಾರದಂದು ಕೊನೆಯುಸಿರೆಳೆದಿದ್ದು, ಅವರ ಪಾರ್ಥಿವ ಶರೀರ ಹುಟ್ಟೂರು ತಲುಪಿದೆ.
ನಿನ್ನೆ ಯಲಹಂಕ ಏರ್ಬೇಸ್ನಿಂದ ಮಧ್ಯಪ್ರದೇಶದ ಭೋಪಾಲ್ಗೆ ವರುಣ್ ಸಿಂಗ್ ಪಾರ್ಥಿವ ಶರೀರ ರವಾನಿಸಲಾಯ್ತು. ಬೆಂಗಳೂರಿನ ಯಲಹಂಕ ಏರ್ಬೇಸ್ನಲ್ಲಿ ವಾಯು ಸೇನಾಧಿಕಾರಿಗಳು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ್ರು. ಜೊತೆಗೆ ವರುಣ್ ಸಿಂಗ್ ಅವರ ಪತ್ನಿ ಹಾಗೂ ಮಕ್ಕಳು ಕೂಡ ಅಂತಿಮ ನಮನ ಸಲ್ಲಿಸಿದ್ರು.
ಇಂದು ಬೆಳಗ್ಗೆ 11 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
- Advertisement -