Monday, June 30, 2025
spot_imgspot_img
spot_imgspot_img

ಇಟ್ಟಿಗೆಯಿಂದ ತಂದೆಯನ್ನೇ ಕೊಲೆ ಮಾಡಿದ ಮಗ: ಕಾರಣ ಕೇಳಿದ್ರೆ ಶಾಕ್ ಆಗ್ತೀರ

- Advertisement -
- Advertisement -

ತಂದೆಯನೇ ಮಗ ಕೊಲೆ ಮಾಡಿದ್ದು, ಕೆಲವು ದಿನಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೇನಹಳ್ಳಿ ಪಿಎಸ್ ಲೇಔಟ್‌ನಲ್ಲಿ ನಡೆದಿದೆ.

ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು (60) ಎಂಬತ ಮೃತಪಟ್ಟ ವ್ಯಕ್ತಿ.

ಆರೋಪಿ ನೀಲಾಧರ ಆಟೋ ಚಾಲಕನಾಗಿದ್ದು, ತಂದೆಯು ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ತಂದೆಯನ್ನೇ ಕೊಂದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. 15 ದಿನಗಳ ಹಿಂದೆ ವಾಸವಾಗಿದ್ದ ಶೆಡ್‌ನಲ್ಲಿದ್ದ ಇಟ್ಟಿಗೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಮಾಹಿತಿ ತಿಳಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಾಗ ಮಗನಿಂದಲೇ ಕೊಲೆಯಾಗಿರೋದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!