Saturday, May 18, 2024
spot_imgspot_img
spot_imgspot_img

ಉಕ್ರೇನ್‌ನಲ್ಲಿ ಉಳಿದಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಕ್ರಮ- ಸಿಎಂ ಬೊಮ್ಮಾಯಿ

- Advertisement -G L Acharya panikkar
- Advertisement -

ಬೆಂಗಳೂರು: ಉಕ್ರೇನ್‌ನಲ್ಲಿ ಇನ್ನುಳಿದ ವಿದ್ಯಾರ್ಥಿಗಳ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಕ್ರಮಕೈಗೊಳ್ಳಲಾಗುತ್ತಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ತಿಳಿಸಿದರು.

ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವವರೆಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಈ ಕುರಿತು ಚರ್ಚಿಸಲಾಗಿದೆ. ಉಕ್ರೇನ್ ನ ಕಾರ್ಕೈವ್ ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ ಎಂದರು.

ಇನ್ನು ಉಕ್ರೇನ್ ನಲ್ಲಿ ಮೆಟ್ರೋ, ಬಂಕರ್ ಗಳಲ್ಲಿ ಬಹಳಷ್ಟು ಜನರನ್ನು ಇರಿಸಿರುವುದು ಆತಂಕದ ವಿಷಯ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರನ್ನು ಮನವಿ ಮಾಡಲಾಗಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವ ತನಕ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ ಎಂದು ತಿಳಿಸಿದರು.

- Advertisement -

Related news

error: Content is protected !!