Saturday, May 18, 2024
spot_imgspot_img
spot_imgspot_img

ಉಗ್ರರು ನುಸುಳಿರೋ ಶಂಕೆ; ಕೇರಳ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸರು!

- Advertisement -G L Acharya panikkar
- Advertisement -

ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಶ್ರೀಲಂಕಾ ಉಗ್ರರು ನುಸಿಳಿರೋ ಸುಳಿವನ್ನು, ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.

driving

ಅಂದಹಾಗೆ ಕೇರಳದ ಕರಾವಳಿ ಪ್ರದೇಶಕ್ಕೆ 12 ಶ್ರೀಲಂಕಾ ಮೂಲಕ ಉಗ್ರರು 2 ಯಾಂತ್ರಿಕ ದೋಣಿಗಳಲ್ಲಿ ಬಂದಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ

ಇನ್ನೂ ಕೇರಳ ಇಲ್ಲವೇ ಕರ್ನಾಟಕದಿಂದ ಪಾಕಿಸ್ತಾನಕ್ಕೆ ತೆರಳೋ ಯೋಜನೆಯಿಂದ ಉಗ್ರರು ಬಂದಿರೋ ಶಂಕೆ ವ್ಯಕ್ತವಾಗಿದೆ. ಜೊತೆಗೆ ಈ ಉಗ್ರರ ಬಗ್ಗೆ ಕರಾವಳಿ ಕಾವಲು ಪಡೆ, ಭಾರತೀಯ ತಟ ರಕ್ಷಣಾ ಪಡೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದಲ್ಲದೇ ಮೀನುಗಾರರಿಗೆ ಕರಾವಳಿ ಭಾಗದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಇಲ್ಲವೇ ಬೋಟ್ ಕಂಡು ಬಂದರೇ, ಕೂಡಲೇ ಪೋಲಿಸರಿಗೆ ಸೂಚಿಸುವಂತೆಯೂ ತಿಳಿಸಲಾಗಿದೆ.

- Advertisement -

Related news

error: Content is protected !!