Saturday, May 4, 2024
spot_imgspot_img
spot_imgspot_img

ಉಡುಪಿ: ಅಕ್ರಮ ಮರಳು ದಕ್ಕೆಗೆ ನಾಗರಿಕ ಹಿತರಕ್ಷಣಾ ಸಮಿತಿಯಿಂದ ದಾಳಿ; ದಂಧೆಕೋರರು ಪರಾರಿ.!

- Advertisement -G L Acharya panikkar
- Advertisement -

vtv vitla
vtv vitla

ಬ್ರಹ್ಮಾವರ: ಜಿಲ್ಲೆಯಲ್ಲಿ ಅಕ್ರಮ‌ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಜನರೇ ಈ ಅಕ್ರಮಗಳನ್ನು ತಡೆಯುತ್ತಿರುವ ಘಟನೆ ಅಲ್ಲಲ್ಲಿ ನಡೆಯುತ್ತಿದೆ. ಉಡುಪಿ ತಾಲೂಕಿನ ಸುರ್ಕುದ್ರುವಿನಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಇಲ್ಲಿನ ಸ್ಥಳೀಯ ನಾಗರಿಕ ಹಿತರಕ್ಷಣಾ ಸಮಿತಿ ಸದಸ್ಯರೇ ತಡೆದಿದ್ದಾರೆ. ಮಾತ್ರವಲ್ಲ, ಅಕ್ರಮ ಮರಳುಗಾರಿಕೆ ನಡೆಸಲು ಬಳಸುತ್ತಿದ್ದ ದೋಣಿಗಳನ್ನೂ ವಶಕ್ಕೆ ಪಡೆದಿದ್ದಾರೆ.

ಮುಂಜಾವ 5 ಗಂಟೆ ಸುಮಾರಿಗೆ ಈ ಪರಿಸರದಲ್ಲಿ ಕೆಲವು ದೋಣಿಗಳಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿರುವುದು ಕಂಡು ಬಂದಿದೆ. ತಕ್ಷಣ ಇಲ್ಲಿನ ಸ್ಥಳೀಯ ಸಮಿತಿಯ 10 ಮಂದಿಯ ತಂಡ 4 ದೋಣಿಗಳನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ 2 ದೋಣಿಯಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇಲ್ಲಿ ಮರಳುಗಾರಿಕೆ ನಡೆಸಲು ಅನುಮತಿ‌ ಇಲ್ಲ. ಈ ಹಿಂದೆಯೂ ಇಲ್ಲಿ ಅಕ್ರಮ ನಡೆಯುತ್ತಿತ್ತು. ಬಳಿಕ ಅನಧಿಕೃತ ಮರಳುಗಾರಿಕೆಗೆ ಅನುಮತಿ ನೀಡದಂತೆ ಮನವಿ ಮಾಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ ಈ ಭಾಗದಲ್ಲಿ ಮರಳುಗಾರಿಕೆ ನಡೆಸಬಾರದು ಎಂದು ಸೂಚನೆ ನೀಡಿದ್ದರು. ಆದರೂ ಇಲ್ಲಿ ಅನಧಿಕೃತವಾಗಿ ಮರಳು ದಂಧೆ ನಡೆಯುತ್ತಲೇ ಇದೆ.ಘಟನಾ ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!