- Advertisement -
- Advertisement -
ಉಡುಪಿ : ವಿವಿದ್ದೋದ್ದೇಶ ಸಹಕಾರಿ ಸಂಘದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಬಿ.ವಿ ಲಕ್ಷ್ಮೀ ನಾರಾಯಣ ಉಪಾಧ್ಯಾಯ ಅವರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕಮಾಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ ಜಿಲ್ಲೆಯ ಜನರಿಗೆ ಠೇವಣಿಗಳಿಗೆ ಹೆಚ್ಚಿನ ಬಡ್ಡಿಯ ಆಮಿಷ ಒಡ್ಡಿ ಕೋಟ್ಯಾಂತರ ರೂ. ಸಂಗ್ರಹಿಸಿ ಹಿಂದಿರುಗಿಸದೆ ವಂಚಿಸಿರುವ ಆರೋಪದ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಸೆನ್ ಪೊಲೀಸರು ಬ್ರಹ್ಮಾವರದ ಮಟಪಾಡಿ ಎಂಬಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ವಿವಿಧ ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿ, ನಿವೃತ್ತ ಉದ್ಯೋಗಿಗಳು, ಉಡುಪಿಯ ಮಠಾಧೀಶರು ಸಹಿತ ನೂರಾರು ಜನ ಕೋಟ್ಯಾಂತರ ರೂ ಠೇವಣಿ ಇರಿಸಿದ್ದರು. ಇದೀಗ ಹಣ ಹಿಂದಿರುಗಿಸದೆ ವಂಚಿಸಿದ್ದರಿಂದ ಠೇವಣಿದಾರರು ದೂರು ನೀಡಿದ್ದಾರೆ.
- Advertisement -