Thursday, April 25, 2024
spot_imgspot_img
spot_imgspot_img

ಉಡುಪಿ: ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕ ಹೃದಯಘಾತದಿಂದ ಮೃತ್ಯು

- Advertisement -G L Acharya panikkar
- Advertisement -
vtv vitla

ಉಡುಪಿ : ಉಡುಪಿಯ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಆನಂದ್ ಜಿ ಗಂಧದ್ (44) ಮೃತಪಟ್ಟ ಶಿಕ್ಷಕ.

ಉಡುಪಿ ಕಲ್ಯಾಣಪುರ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆನಂದ್ ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

- Advertisement -

Related news

error: Content is protected !!