- Advertisement -
- Advertisement -
ಉಡುಪಿ: ಮಣಿಪಾಲದ ರಾಜೀವ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಅಳವಡಿಸಿದ “ಕಾಪುವಿಗಾಗಿ ಕಾಂಗ್ರೆಸ್’ ಕಾರ್ಯಕ್ರಮದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದಿರುವ ಘಟನೆ ನಡೆದಿದೆ.
ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಗೃಹ ಲಕ್ಷ್ಮೀ ಅನ್ನ ಭಾಗ್ಯ ಯೋಜನೆಯ ಜೊತೆಗೆ ಕಾಪುವಿಗಾಗಿ ಕಾಂಗ್ರೆಸ್ ಎಂಬ ಕಾರ್ಯಕ್ರಮದ ವಿನಯ್ ಕುಮಾರ್ ಸೊರಕೆ ಅವರ ಬ್ಯಾನರ್ ನ್ನು ಮಣಿಪಾಲದ 80 ಬಡಗಬೆಟ್ಟು ಗ್ರಾಮದ ರಾಜೀವ ನಗರದಲ್ಲಿ ಅಳವಡಿಸಲಾಗಿತ್ತು.
ಈ ಬ್ಯಾನರ್ ನ್ನು ಕಿಡಿಗೇಡಿಗಳು ಹಾಳುಗೆಡವಿದ್ದಾರೆ. ರಾತ್ರಿ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಕಾಂಗ್ರೆಸ್ ನ್ನು ವಿರೋಧಿಸುವವರಿಂದಲೇ ಈ ಕೆಲಸ ಆಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
- Advertisement -