Saturday, June 28, 2025
spot_imgspot_img
spot_imgspot_img

ಉಡುಪಿ: ಕಾಲೇಜು ವಿದ್ಯಾರ್ಥಿನಿಯರ ಜೊತೆ ವಿಕೃತವಾಗಿ ವರ್ತಿಸುತ್ತಿದ್ದ ಬಸ್ ಕಂಡಕ್ಟರ್ ಅರೆಸ್ಟ್!

- Advertisement -
- Advertisement -

ಉಡುಪಿ: ಇಲ್ಲಿನ ಸಂತೆಕಟ್ಟೆಯ ನರ್ಸಿಂಗ್ ಕಾಲೇಜಿನ ಬಳಿ ವಿದ್ಯಾರ್ಥಿನಿಯರನ್ನು ಕಂಡು ವಿಕೃತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಖಾಸಗಿ ಬಸ್ ನಿರ್ವಾಹಕನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಕ್ಕಿಕಟ್ಟೆ ನಿವಾಸಿ ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಎನ್ನಲಾಗಿದೆ.

ಕಳೆದ ಹಲವಾರು ದಿನಗಳಿಂದ ಈತ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ವಿಕೃತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ವಿರುದ್ಧ ಕಾಲೇಜು ಹಾಸ್ಟೆಲ್ ಆಡಳಿತಾಧಿಕಾರಿಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಲವಾರು ದಿನಗಳಿಂದ ವಿಕೃತವಾಗಿ ವರ್ತಿಸುತ್ತಿದ್ದ ಈತ ಮತ್ತೆ ಹಳೆ ಚಾಳಿ ಮುಂದುವರಿಸಿದ್ದ ಹಿನ್ನಲೆಯಲ್ಲಿ ನ.6ರಂದು ರಾತ್ರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈತನನ್ನು ಅಟ್ಟಾಡಿಸಿ ಥಳಿಸಿದ್ದರು.

ಪೊಲೀಸರು ಆರೋಪಿಯನ್ನು ಬಂಧಿಸಿ ಮಾನಭಂಗ ದೂರು ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Related news

error: Content is protected !!