Friday, April 19, 2024
spot_imgspot_img
spot_imgspot_img

ಉಡುಪಿ ಕೃಷ್ಣ ಮಠ ಹಾಗೂ ಕೊಲ್ಲೂರು ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

- Advertisement -G L Acharya panikkar
- Advertisement -

ಕರಾವಳಿ ಜಿಲ್ಲೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದು, ಉಡುಪಿಯ ಕೃಷ್ಣ ಮಠಕ್ಕೆ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕ್ಷೇತ್ರದ ಆಡಳಿತ ಮಂಡಳಿ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡಿದ್ದಾರೆ.

ಕೇಂದ್ರ ಸಚಿವೆ‌ ನಿರ್ಮಾಲಾ ಸೀತಾರಾಮನ್ ಅವರು ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಪರ್ಯಾಯ ಶ್ರೀ ಪಾದ ವಿದ್ಯಾಸಾಗರತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದಿದ್ದಾರೆ. ನಿರ್ಮಲಾ ಸೀತರಾಮನ್ ಅವರು ಇಂದು ಉಡುಪಿಯಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಕೂಡ ಹಿರಿಯ ಸಚಿವೆಯ ಜೊತೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಸಿಂಗಾಪುರದ ಗ್ರಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.

- Advertisement -

Related news

error: Content is protected !!