Friday, April 19, 2024
spot_imgspot_img
spot_imgspot_img

ಉಡುಪಿ: ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

- Advertisement -G L Acharya panikkar
- Advertisement -

ಉಡುಪಿ: ಶಾಲಾ ಆವರಣದ ಹೊರಗೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಅಜ್ಜರಕಾಡು ಆಸ್ಪತ್ರೆಯ ಎದುರಿನಲ್ಲಿ ಇಂದು ಸಂಜೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿದ್ದು, ಬಳಿಕ ಹೊರಗಿನಿಂದ ಬಂದ ತಂಡ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ವಿದ್ಯಾರ್ಥಿಗಳು ಹೆಲ್ಮೆಟ್ ನಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳ ಗಲಾಟೆ ಕಂಡು ಸ್ಥಳೀಯರು ನಗರ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

vtv vitla
- Advertisement -

Related news

error: Content is protected !!