Friday, April 26, 2024
spot_imgspot_img
spot_imgspot_img

ಉಡುಪಿ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ; ಆಡಳಿತ ಮಂಡಳಿಯ ಕಿರಿಕಿರಿಯೇ ಆತ್ಮಹತ್ಯೆಗೆ ಪ್ರೇರಣೆಯಾ..?

- Advertisement -G L Acharya panikkar
- Advertisement -

ಉಡುಪಿ: ಖಾಸಗಿ ಕಾಲೇಜಿನ ಆಡಳಿತ ಮಂಡಳಿಯಿಂದ ವಿದ್ಯಾರ್ಥಿನಿಗೆ ಶುಲ್ಕ ವಿಷಯವಾಗಿ ಬೈದು ಮಾನಸಿಕವಾಗಿ ಹಿಂಸೆ ನೀಡಿದ್ದ ಕಾರಣ ಮನನೊಂದು ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ.

ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಯಾನೆ ಸೂರಿ ಮತ್ತು ಹೇಮ ದಂಪತಿ ಮಗಳಾದ ತೃಪ್ತಿ(16) ಖಾಸಗಿ ಶಿಕ್ಷಣ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ (ವಿಜ್ಞಾನ ವಿಭಾಗ) ವಿದ್ಯಾಭ್ಯಾಸಕ್ಕೆ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣ ಆಡಳಿತ ಮಂಡಳಿ ತೃಪ್ತಿಯನ್ನು ಬೈದಿದ್ದಾರೆ, ಮತ್ತು ಫೈನ್ ಹಾಗೂ ಸಂಪೂರ್ಣ ಪೀಸ್ ಕಟ್ಟಬೇಕೆಂದಿದ್ದಾರೆ ಎಂದು ಕಳೆದ ಮೂರು ದಿನಗಳ ಹಿಂದೆ ತೃಪ್ತಿ ತಂದೆಯ ಬಳಿ ಹೇಳಿಕೊಂಡಿದ್ದರು. ಆದರೆ ಇದರಿಂದಾಗಿ ಮಾನಸಿಕವಾಗಿ ನೊಂದ ತೃಪ್ತಿ ನಿನ್ನೆ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದರೆ ಇದರಿಂದಾಗಿ ಮಾನಸಿಕವಾಗಿ ನೊಂದ ತೃಪ್ತಿ ನಿನ್ನೆ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುರೇಶ್ ಮೆಂಡನ್ ಅವರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!