Saturday, July 5, 2025
spot_imgspot_img
spot_imgspot_img

ಉಡುಪಿ: ಗಾಂಜಾ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

- Advertisement -
- Advertisement -

ಉಡುಪಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ.

ಆರೋಪಿಯನ್ನು ಅರ್ಫನ್ (27) ಎಂದು ಗುರುತಿಸಲಾಗಿದೆ.

ಆರೋಪಿ ಅರ್ಫನ್ ವಿರುದ್ದ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ 05 ಸೆಪ್ಟಂಬರ್ 2020 ರಂದು ಗಾಂಜಾ ಪ್ರಕರಣ ದಾಖಲಾಗಿದ್ದು, ಆತನಿಂದ 1 ಕೆಜಿ, 048 ಗ್ರಾಂ ತೂಕದ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣದಲ್ಲಿ ಅಂದಿನ ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ರವರು ಪಿರ್ಯಾದಿದಾರರಾಗಿದ್ದು, ಪಿಎಸ್‌ಐ ಶ್ರೀ ಲಕ್ಷ್ಮಣ ರವರು ಈ ಪ್ರಕರಣದಲ್ಲಿ ದೋಷಾರೋಪಣಾ ಪತ್ರವನ್ನು ತಯಾರಿಸಿರುತ್ತಾರೆ.

ಇನ್ನು 03 ಸೆಪ್ಟಂಬರ್ 022 ರಂದು ಆರೋಪಿ 1 ನೇಯವರಾದ ಅರ್ಫನ್ ರವರಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 30,000 ದಂಡ ವಿಧಿಸಿದ್ದು, ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ, ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಧೀಶರಾದ ಶಾಂತವೀರ ಶಿವಪ್ಪರವರು ತೀರ್ಪು ನೀಡಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ಶ್ರೀಮತಿ ಶಾಂತಿಬಾಯಿ ರವರು ವಾದ ಮಂಡನೆಯನ್ನು ಮಾಡಿದ್ದು, ಸದ್ರಿ ಗಾಂಜಾ ಪ್ರಕರಣದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ಇಲಾಖೆಯ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.

- Advertisement -

Related news

error: Content is protected !!