- Advertisement -
- Advertisement -
ಉಡುಪಿ: ದಾಸ್ತಾನು ಇರಿಸಿದ್ದ ಗುಜರಿ ಅಂಗಡಿವೊಂದರಲ್ಲಿ ಆಕಸ್ಮಿಕವಾಗಿ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಕಿನ್ನಿ ಮುಲ್ಕಿ ಗೋಪುರ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಇರಿಸಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ಗುಜರಿ ವಸ್ತುಗಳಿಗೆ ತಡರಾತ್ರಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ.
ಬೆಂಕಿಯ ಜ್ವಾಲೆ ನೋಡಿದ ಸ್ಥಳೀಯರು ಅಗ್ನಿ ಶಾಮದಳಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
- Advertisement -