- Advertisement -
- Advertisement -
ಉಡುಪಿ: ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಾಪುವಿನ ಮಹಾಲಸಾ ಸ್ಟೋರ್ ಮಾಲೀಕ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆಗೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ ಘಟನೆ ನಡೆದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ರಾಘವೇಂದ್ರ ಕಿಣಿ ಅವರು ದೂರು ನೀಡಿದ್ದರು.
ಕೂಡಲೇ ಕಾರ್ಯಚರಣೆಗಿಳಿದ ಕಾಪುವಿನ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ಇಂದು ಬೆಳಿಗ್ಗೆ ಅಂಗಡಿಗೆ ಕರೆತಂದು ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -