Friday, May 17, 2024
spot_imgspot_img
spot_imgspot_img

ಉಡುಪಿ: ಚಲಿಸುತ್ತಿದ್ದಾಗಲೇ ಬೆಂಕಿಗಾಹುತಿಯಾದ ಸ್ಕೂಟರ್

- Advertisement -G L Acharya panikkar
- Advertisement -

ಉಡುಪಿ: ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಪೆಟ್ರೋಲ್‌ ಚಾಲಿತ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಒಮ್ಮೆಗೆ ಆಫ್‌ ಆದ ಸ್ಕೂಟಿಯಲ್ಲಿ ಒಮ್ಮಿಂದೊಮ್ಮೆಗೇ ಬೆಂಕಿ ಕಾಣಿಸಿಕೊಂಡಿದೆ.

ಕಾರ್ಕಳ ಮೂಲದ ವ್ಯಕ್ತಿಯೊಬ್ಬರು ಎಣ್ಣೆಹೊಳೆ ಸೇತುವೆ ಬಳಿ ಬರುತ್ತಿದ್ದಾಗ ವಾಹನ ಸಡನ್ ಆಗಿ ಆಫ್ ಆಗಿದೆ. ಇಳಿದು ನೋಡುವಾಗಲೇ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಸ್ಕೂಟಿ ಸುಟ್ಟು ಕರಕಲಾಗಿದೆ.

ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಕೆಲವು ವಿದ್ಯುತ್‌ ಚಾಲಿತ ವಾಹನಗಳು ಬ್ಯಾಟರಿ ಸಮಸ್ಯೆಯಿಂದ ಬೆಂಕಿಗಾಹುತಿ ಆಗುವ ಸಮಸ್ಯೆ ಕಂಡುಬರುತ್ತಿತ್ತು.

- Advertisement -

Related news

error: Content is protected !!