- Advertisement -
- Advertisement -
ಉಡುಪಿ : ದ್ವಿ ಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಉಡುಪಿ ಪಡುಬಿದ್ರೆಯಲ್ಲಿ ನಡೆದಿದೆ.
ಕಲ್ಸಂಕ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ 68 ವರ್ಷದ ವಿಜಯ ಪೂಜಾರಿ ಎಂದು ಗುರುತಿಸಲಾಗಿದೆ. ವಿಜಯ ಅವರು ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದು , ಉಡುಪಿಯಿಂದ ಕೆಲಸ ಮುಗಿಸಿಕೊಂಡು ದ್ವಿ ಚಕ್ರವಾಹನದಲ್ಲಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಪಡುಬಿದ್ರಿ ಕಲ್ಸಂಕ ಸೇತುವೆ ಬಳಿ ಪಿಕಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಸ್ಕೂಟಿ ಸವಾರ ಎಸೆಯಲ್ಪಟ್ಟರೆ, ಸ್ಕೂಟರ್ ಪಿಕಪ್ ನಡಿಯಲ್ಲಿ ಸಿಲುಕಿಕೊಂಡಿತ್ತು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
- Advertisement -