- Advertisement -
- Advertisement -
ಉಡುಪಿ: ಹಠಾತ್ತನೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 76ನೇ ಬಡಗುಬೆಟ್ಟು ಗ್ರಾಮದ ಚಿಟ್ಟಾಡಿಯ ಬಸ್ಸು ನಿಲ್ದಾಣದಲ್ಲಿ ನಡೆದಿದೆ. ಉಡುಪಿಯ ಚಿತ್ತರಂಜನ್ ಸರ್ಕಲ್ನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಗೇಶ (54) ಮೃತಪಟ್ಟವರು.
ನ.11 ರಂದು ಸಂಜೆ ವೇಳೆ ಉಡುಪಿ ತಾಲೂಕಿನ 76ನೇ ಬಡಗುಬೆಟ್ಟು ಗ್ರಾಮದ ಚಿಟ್ಟಾಡಿಯ ಹೋಟೆಲ್ ವೊಂದರ ಬಳಿಯ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ತಮ್ಮ ಸಂತೋಷ್ ಆಚಾರ್ಯ ಅವರು ನೀಡಿದ ಮಾಹಿತಿಯಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -