Saturday, May 4, 2024
spot_imgspot_img
spot_imgspot_img

ಉಡುಪಿ: ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ; ಸವಾರರಿಬ್ಬರು ಮೃತ್ಯು..!!

- Advertisement -G L Acharya panikkar
- Advertisement -
vtv vitla

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30) ಮತ್ತು ಗಿರೀಶ್ (26) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಪಡುಬಿದ್ರೆ ಕಡೆಗೆ ಇವರಿಬ್ಬರು ಸಂಚರಿಸುತ್ತಿದ್ದು, ಇದೇ ವೇಳೆ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಮೂಳೂರಿನ ನರ್ಸರಿ ಬಳಿ ಈ ಅಪಘಾತ ಸಂಭವಿಸಿದ್ದು ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಅದರ ಚಕ್ರಕ್ಕೆ ಸಿಲುಕಿದ್ದರು.

ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಗಿರೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!