Saturday, April 20, 2024
spot_imgspot_img
spot_imgspot_img

ಉಡುಪಿ: ಬೈಕ್ ಕಳವು ಪ್ರಕರಣ; ಓರ್ವ ಅರೆಸ್ಟ್

- Advertisement -G L Acharya panikkar
- Advertisement -

ಉಡುಪಿ: ಅಪಾರ್ಟ್‌‌ಮೆಂಟ್ ಬಳಿ ನಿಲ್ಲಿಸಿದ್ದ ಬೈಕ್ ಕಳವುಗೈದ ಘಟನೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುರಾಜ್ ನಾಯ್ಕ ಬಂಧಿತ ಆರೋಪಿ.

ಐದು ದಿನಗಳ ಹಿಂದೆ ಮಣಿಪಾಲ ಠಾಣೆಯಲ್ಲಿ ಶಿವಳ್ಳಿ ಗ್ರಾಮದ ವಿ.ಪಿ ನಗರದಲ್ಲಿನ ಅಪಾರ್ಟ್‌‌ಮೆಂಟ್ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಕಳವು ಪ್ರಕರಣದ ಆರೋಪಿಯ ಪತ್ತೆಗೆ ಮುಂದಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ವಿರುದ್ಧ ಉಡುಪಿ ನಗರ, ಕುಂದಾಪುರ ಪೊಲೀಸ್ ಠಾಣೆ ಅಲ್ಲದೇ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ 13 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!