- Advertisement -
- Advertisement -
ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.
ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರೀ ಪ್ರಮಾಣದ ಚಿನ್ನಾಭರಣಗಳ ಜೊತೆಗೆ ನಗದು ಕೂಡ ಪತ್ತೆಯಾಗಿದೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ತಂಡಕ್ಕೆ ಪರಿಶೀಲನೆಯ ವೇಳೆ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಸಿಕ್ಕಿವೆ. ಇಂದು ಇಡೀ ದಿನ ತಪಾಸಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
- ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ
- ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ; ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ ಅರೆಸ್ಟ್..!
- ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸುರಕ್ಷಿತ; ಇಂಡಿಯನ್ ಆಯಿಲ್ ಸ್ಪಷ್ಟನೆ..!
- ಲೈಂಗಿಕ ಕಿರುಕುಳ ಆರೋಪ; ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್..!
- ಬ್ರಹ್ಮಾವರ: ಯುವಕನಿಗೆ ಲೈಂಗಿಕ ಕಿರುಕುಳ; ಆರೋಪಿ ವಾಸ್ತುತಜ್ಞ ಅರೆಸ್ಟ್..!
- Advertisement -