Saturday, June 28, 2025
spot_imgspot_img
spot_imgspot_img

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಜಗಳ; ಓರ್ವನ ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಉಡುಪಿ : ಉದ್ಯಾವರದ ಸಮೀಪದ ಪಿತ್ರೋಡಿಯಲ್ಲಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತರನ್ನು ಇಲ್ಲಿನ ಪಿತ್ರೋಡಿ ನಿವಾಸಿಯಾಗಿರುವ ದಯಾನಂದ (40ವ) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ದಯಾನಂದ ಹಾಗೂ ಭರತ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಬಾರ್ ನಿಂದ ಹೊರಗೆ ಬಂದ ನಂತರ ಜಗಳ ತೀವ್ರ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದನ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ.

ಇದರಿಂದ ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ.
ಘಟನೆಯ ಬಳಿಕ ಆರೋಪಿ ಭರತ್ ಸ್ಥಳದಿಂದ ನಾಪತ್ತೆಯಾಗಿದ್ದು , ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!