- Advertisement -
- Advertisement -
ಉಡುಪಿ: ಇಲ್ಲಿನ ಮಲ್ಪೆ ವಡಭಾಂಡೇಶ್ವರ ದೇವಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಮನೆಯ ಯಜಮಾನಿ ಜಯಲಕ್ಷ್ಮಿ ಎಂಬುವವರು ಅ.16 ರಂದು ಮನೆಗೆ ಬೀಗ ಹಾಕಿ ಬೆಂಗಳೂರಿನಲ್ಲಿರುವ ಮಗನ ಮನೆಗೆ ಹೋಗಿದ್ದರು. ಕಳ್ಳರು ಈ ಸಮಯದಲ್ಲಿ ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಲಾಗಿದ್ದು, ಅ.23 ರಂದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಸುಮಾರು 7.21 ಲಕ್ಷ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣಗಳು ಹಾಗೂ 70,000 ನಗದು ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.
- Advertisement -