- Advertisement -
- Advertisement -
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರ ಕರಣ ಮಿತಿಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ ಹೆಚ್ಚುತ್ತಿರುವ ಕಾರಣದಿಂದ ಒಟ್ಟು 10 ದಿನಗಳ ಕಾಲ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಪ್ರತಿ ಮನೆಗಳಿಗೂ ಆರೋಗ್ಯ ಕಾರ್ಯಕರ್ತರು ಭೇಟಿ ನೀಡುತ್ತಿದ್ದು, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು, ನೈರ್ಮಲ್ಯಕ್ಕೆ ಆದ್ಯ ತೆ ನೀಡಲು ಸೂಚನೆ ನೀಡುತ್ತಿದ್ದಾರೆ.
- Advertisement -