Thursday, April 25, 2024
spot_imgspot_img
spot_imgspot_img

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ ಹೊಂದಿ ವ್ಯಕ್ತಿ ದುರ್ಮರಣ

- Advertisement -G L Acharya panikkar
- Advertisement -

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಾಗಿಲುವಿನ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ.

ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ಇತರರೊಂದಿಗೆ ನೃತ್ಯ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಇವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅಷ್ಟಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಚಿನ್ನದ ಆಭರಣ ತಯಾರಿಕೆ ವೃತ್ತಿ ನಡೆಸುತ್ತಿದ್ದ ಗಣಪತಿ ಆಚಾರ್ಯ ಅವರು ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

- Advertisement -

Related news

error: Content is protected !!