- Advertisement -
- Advertisement -
ಉಡುಪಿ: ಯೂಟ್ಯೂಬ್ ಚಾನೆಲ್ ನೋಡಿ ಆರನೇ ತರಗತಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಘಟನೆ ಬ್ರಹ್ಮಗಿರಿಯ ಪ್ಲಾಟ್ ವೊಂದರಲ್ಲಿ ನಡೆದಿದೆ. ಉಡುಪಿ ಸಾಯಿರಾಧ ಡೆಲಪರ್ಸ್ ನ ಉದ್ಯೋಗಿ ಪ್ರವೀಣ್ ಶೆಟ್ಟಿ ಎಂಬವರ ಮಗಳು ಮಂಗಳದೇವಿ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಯೂಟ್ಯೂಬ್ ಚಾನೆಲ್ ನೋಡಿ ಮನೆಯ ಬಾತ್ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿ ಕುಂಜಾರುಗಿರಿಯ ಆನಂದ ತೀರ್ಥ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದು.
ನಿನ್ನೆ ಮಕರ ಸಂಕ್ರಾಂತಿಯ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಹೆತ್ತವರು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದಾಗ ಬಾಲಕಿ ಬೆಡ್ ರೂಮ್ ನ ಬಾಗಿಲು ತೆರೆಯದಾಗ ಸಂಶಯಗೊಂಡು ಬಾಗಿಲು ಒಡೆದು ಒಳಹೋದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಇದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -