Sunday, June 29, 2025
spot_imgspot_img
spot_imgspot_img

ಉಡುಪಿ: ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

- Advertisement -
- Advertisement -

ಉಡುಪಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೋರ್ವರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡುವ ಜಯರಾಮ ಆಚಾರ್ಯ (51) ಮೃತ ದುರ್ದೈವಿ.

ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ-66 ರ ಬದಿಯಲ್ಲಿ ಹೆದ್ದಾರಿ ದಾಟಲು ಕಾಯುತ್ತಿದ್ದ ಜಯರಾಮ ಆಚಾರ್ಯ ಅವರಿಗೆ ಲಾರಿ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!