Friday, March 29, 2024
spot_imgspot_img
spot_imgspot_img

ಉಡುಪಿ: ಲಾರಿ ಅಪಘಾತದಲ್ಲಿ ತಂದೆ-ಮಗ ಸಾವು ಪ್ರಕರಣ; ನಿದ್ದೆಯ ಮಂಪರಿಗೆ 16 ವರ್ಷದ ಬಾಲಕನಿಗೆ ಲಾರಿ ಕೊಟ್ಟ ಚಾಲಕ ಅರೆಸ್ಟ್‌

- Advertisement -G L Acharya panikkar
- Advertisement -

ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್‌ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುವ ವೇಳೆ ಲಾರಿ ಚಾಲಕ ಶೇಖರ್‌ ನಿದ್ದೆಯಲ್ಲಿದ್ದು, ಗೂಡ್ಸ್‌ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಅಪಘಾತ ನಡೆಸಿ ಸ್ಥಳದಿಂದ ಪರಾರಿಯಾಗಿದ್ದ ಗೂಡ್ಸ್‌ ಲಾರಿಯನ್ನು ಪೊಲೀಸರು ಸಿಸಿ ಟಿವಿ ಫೂಟೇಜ್‌ಗಳನ್ನು ಆಧರಿಸಿ ಬೆಂಬತ್ತಿ ಹೋಗಿ ಲಾರಿಯ ಚಾಲಕ, ಆರೋಪಿ ಶೇಖರ್‌ನನ್ನು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಲಾರಿಯನ್ನು 16 ವರ್ಷದ ಬಾಲಕ ರಾತ್ರಿಯಿಡೀ ಚಲಾಯಿಸಿಕೊಂಡು ಬಂದಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಇನ್ನು ಆ ಬಾಲಕ ಲಾರಿಯ ಕ್ಲೀನರ್‌ ಬಾಯ್‌ ಆಗಿದ್ದು, ಬಾಲಕನು ಯಾವುದೇ ಲಾರಿಯಾದರೂ ರಾತ್ರಿ ವೇಳೆ ಮುಂಬಯಿ ಎಕ್ಸ್‌ಪ್ರೆಸ್‌ ವೇನಂತಹ ಹೆದ್ದಾರಿಯಲ್ಲೂ ಸಹಿತ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.

ಪ್ಲಾಸ್ಟಿಕ್‌ ಉತ್ಪಾದನೆಯ ಕಚ್ಚಾ ವಸ್ತುವನ್ನು ಗುಜರಾತ್‌ನಿಂದ ಹೊತ್ತು ಬರುತ್ತಿದ್ದ ಈ ಲಾರಿಯನ್ನು ಪೊಲೀಸರು ಗಂಜಿಮಠ ಪರಿಸರದಿಂದ ವಶಕ್ಕೆ ಪಡೆದುಕೊಂಡಿದ್ದು, ಚಾಲಕ ಶೇಖರ್‌ನನ್ನು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕನನ್ನು ಖಾಸಗಿ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

ಲಾರಿ ಚಾಲಕನ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಲಾರಿ ಏಜೆನ್ಸಿಯ ಪರವಾನಿಗೆ ರದ್ಧತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ:

ಸೂರ್ಯ ಚೈತನ್ಯ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಸಮರ್ಥ, ರಜೆಯಲ್ಲಿ ಗಣೇಶ ಚೌತಿ ಹಬ್ಬಕ್ಕೆ ಊರಿಗೆ ತೆರಳಿದ್ದು, ತಂದೆಯೊಂದಿಗೆ ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಉಚ್ಚಿಲದಲ್ಲಿ ಇಳಿದಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿಯಾಗಿತ್ತು.

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್‌ ಲಾರಿಯೊಂದು ಢಿಕ್ಕಿಯಾಗಿ ತಂದೆ ಪ್ರಭಾಕರ ಮೇಲೆ ಲಾರಿಯ ಚಕ್ರ ಮೈಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಗ ಗಂಭೀರ ಗಾಯಗೊಂಡು, ಆಸ್ಪತ್ರಗೆ ದಾಖಲಾಗಿದ್ದರು.ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಾನೆ.

ಲಾರಿಯ ಚಕ್ರ ಮೈಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಸಮರ್ಥ್ ತಂದೆ ಪ್ರಭಾಕರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು.

vtv vitla
- Advertisement -

Related news

error: Content is protected !!