Saturday, May 4, 2024
spot_imgspot_img
spot_imgspot_img

ಉಡುಪಿ: ಶರತ್‌ ಶೆಟ್ಟಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್‌

- Advertisement -G L Acharya panikkar
- Advertisement -
vtv vitla

ಉಡುಪಿ: ಪಾಂಗಾಳದಲ್ಲಿ ಕೊಲೆಯಾದ ಶರತ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್‌ನ ಕುಳಾಯಿ ನಿವಾಸಿಗಳಾದ ದಿವೇಶ್‌ ಶೆಟ್ಟಿ(20), ಲಿಖಿತ್‌ ಕುಲಾಲ್‌(21), ಮಂಗಳೂರು ನಿವಾಸಿ ಆಕಾಶ್‌ ಕರ್ಕೇರ(25), ಪಣಂಬೂರು ನಿವಾಸಿ ಪ್ರಸನ್ನ ಶೆಟ್ಟಿಯನ್ನು(40) ಎಂದು ಗುರುತಿಸಲಾಗಿದೆ. ಇವರಲ್ಲಿ ದಿವೇಶ್ ಮತ್ತು ಲಿಖಿತ್‌ನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ಆಕಾಶ್ ಮತ್ತು ಪ್ರಸನ್ನ ಶೆಟ್ಟಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.ಕೊಲೆಯ ಪ್ರಮುಖ ಆರೋಪಿ ಯೋಗೀಶ್‌ ಆಚಾರ್ಯ ಸಹಿತ ಕೆಲವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ತಿಳಿಸಿದರೆ.

ಪಾಂಗಾಳದಲ್ಲಿ ಜಾಗದ ತಕರಾರಿಗೆ ಸಂಬಂಧಿಸಿ ಡಿಸೆಂಬರ್ ತಿಂಗಳಲ್ಲಿ ಯೋಗೀಶ್ ಆಚಾರ್ಯರವರಿಗೆ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಜೊತೆಗಿದ್ದ ಶರತ್ ಶೆಟ್ಟಿ , ಯೋಗೀಶ್ ಸಹಾಯಕ್ಕೆ ಬಾರದೆ ಸ್ಥಳದಿಂದ ಓಡಿಹೋಗಿದ್ದನು. ಇದೇ ದ್ವೇಷದಿಂದ ಯೋಗೀಶ್ ಆಚಾರ್ಯ, ಭೂಗತ ಪಾತಕಿ ಕಲಿ ಯೋಗೀಶನನ್ನು ಸಂಪರ್ಕಿಸಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಅವರು ತಿಳಿಸಿದರೆ.

- Advertisement -

Related news

error: Content is protected !!