- Advertisement -
- Advertisement -
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಸಚಿವ ಸ್ನಾನಕ್ಕೆ ಈಶ್ವರಪ್ಪ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಕೂಡ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ.
ಇತ್ತ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂತಹ ಅವಘಡ ಮುಂದೆ ಆಗದಂತೆ, ಮಾಲೀಕರು ದೇವರ ಮೊರೆ ಹೋಗಿದ್ದಾರೆ. ಇನ್ನೂ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ರೂಂ ಅನ್ನು ಯಾರಿಗೂ ನೀಡಿಲ್ಲ. “ಅಲ್ಲದೆ ಹೋಟೆಲ್ಗೆ ಬರುವ ಕಸ್ಟಮರ್ಗೆ ಯಾವುದೇ ಭಯ ಇರಬಾರದು ಎಂದು ಹೋಟೆಲ್ ನಲ್ಲಿ ದೇವರಪೂಜೆ ಮಾಡಿ ಗಣ ಹೋಮ ನಡೆಸಲು ತೀರ್ಮಾನಿಸಲಾಗಿದೆ” ಎಂದು ಶಾಂಭವಿ ಲಾಡ್ಜ್ ಲೀಸ್ ಪಡೆದ ದಿನೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
- Advertisement -