Monday, June 30, 2025
spot_imgspot_img
spot_imgspot_img

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೈರಲ್

- Advertisement -
- Advertisement -

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು .

ಇದೀಗ ಪೋಸ್ಟ್ ಹಾಕಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪನಿರೀಕ್ಷಕರಿಗೆ ದೂರು ನೀಡಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮುಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಪೂಜಾರಿ, ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಕಾಪು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋನು ಪಾಂಗಾಳ, ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.

vtv vitla
- Advertisement -

Related news

error: Content is protected !!