- Advertisement -
- Advertisement -
ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು , ಬೈಕ್ ನದಿಯ ಮೇಲೆ ಇಟ್ಟು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಶೋಕ್ ಸುವರ್ಣ ನಾಪತ್ತೆಯಾದ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
- Advertisement -