Monday, June 30, 2025
spot_imgspot_img
spot_imgspot_img

ಉಡುಪಿ: ಸ್ಯಾನಿಟೈಸರ್‌ ಬಳಸಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ: ಸ್ಯಾನಿಟೈಸರ್‌ ಹಾಕಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳು ಅಗ್ನಿ ಅವಘಡದಿಂದಾಗಿ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನಡೆದಿದೆ.

ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ ಬೆಂಕಿ ಹಚ್ಚುವ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಅಮರೇಶ್ ಹಾಗೂ ಐದನೇ ತರಗತಿಯ ವಿದ್ಯಾರ್ಥಿಗಳಾದ ವಿನೋದ್ ಮತ್ತು ಮನೋಜ್ ಗಾಯಗೊಂಡವರು. ಮೂವರು ವಿದ್ಯಾರ್ಥಿಗಳು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಭೇಟಿ ನೀಡಿ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!