Saturday, June 28, 2025
spot_imgspot_img
spot_imgspot_img

ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ.

ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪತ್ನಿಯಿಂದ ವಿಚ್ಛೇದನ ಪಡೆದು ಒಬ್ಬಂಟಿಯಾಗಿ ವಾಸವಾಗಿದ್ದರು. ಇವರು ಪ್ರತಿ ದಿನ ಊಟ, ಉಪಹಾರಕ್ಕೆ ಮನೆ ಸಮೀಪದ ದೊಡ್ಡಮ್ಮನ ಮನೆಗೆ ಹೋಗುತ್ತಿದ್ದರು. ಅ. 18ರಂದು ರಾತ್ರಿ ದೊಡ್ಡಮ್ಮನ ಮಗಳು ಜಯಂತಿ ಎಂಬವರು ಪ್ರವೀಣ್ ಅವರಿಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದ್ದರು. 10-15 ನಿಮಿಷದಲ್ಲಿ ಬರುತ್ತೇನೆ ಇಲ್ಲದಿದ್ದರೆ, ಬೆಳಿಗ್ಗೆ ತಿಂಡಿ ತಿನ್ನಲು ಬರುತ್ತೇನೆ ಎಂದು ತಿಳಿಸಿದ್ದರು. ಅಂದು ಊಟಕ್ಕೆ ಬಂದಿರಲಿಲ್ಲ.

ಅ. 19ರಂದು ಬೆಳಿಗ್ಗೆ 8ಗಂಟೆಗೆ ಜಯಂತಿ ಅವರು ಕರೆ ಮಾಡಿದಾಗ ಪ್ರವೀಣ್‌ ಅವರ ಮೊಬೈಲ್ ಸ್ಪೀಚ್ ಆಫ್ ಆಗಿತ್ತು. ಎರಡು ದಿನಗಳ ಬಳಿಕ ಬ್ರಹ್ಮಾವರ ಸೇತುವೆಯ ಪ್ರವೀಣ್ ಸ್ಕೂಟರ್ ಪತ್ತೆಯಾಗಿತ್ತು. ಆ ಬಳಿಕ ಪ್ರವೀಣ್ ಗಾಗಿ ಅಗ್ನಿಶಾಮಕ ದಳ ಪೊಲೀಸರ ಸಹಕಾರದೊಂದಿಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಆದರೆ ಪ್ರವೀಣ್ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಪ್ರವೀಣ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!