Friday, May 3, 2024
spot_imgspot_img
spot_imgspot_img

ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ – ಸ್ಥಿತಿ ಚಿಂತಾಜನಕ

- Advertisement -G L Acharya panikkar
- Advertisement -

ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ಕಬ್ಬಿಣದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಲೆವೂರು ಸಮೀಪದ ಮಂಚಿಯಲ್ಲಿ ನಡೆದಿದೆ.

ಕೃಷ್ಣ ನಾಯ್ಕ (54) ಇರಿತಕ್ಕೆ ಒಳಗಾದವರು. ನೆರೆ ಮನೆಯ 23 ವರ್ಷದ ಯುವಕನೋರ್ವ ಕೃಷ್ಣ ನಾಯ್ಕ ಅವರ ಮನೆಗೆ ನುಗ್ಗಿ ಅವರಿಗೆ ಕಬ್ಬಿಣದ ಸಲಕರಣೆಯಿಂದ ಇರಿದು ಪರಾರಿಯಾಗಿದ್ದಾನೆ.

ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!