ಉಡುಪಿ: ಇನ್ನೊವಾ ಕಾರಿನಲ್ಲಿ ಬಂದ ನಾಲ್ವರ ತಂಡವು ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ಉಡುಪಿ ರಥಬೀದಿ ಕನಕದಾಸ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜುನಿಂದ ರೋಗಿಯೊಬ್ಬರು ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದರು ಎನ್ನಲಾಗಿದೆ. ಯೋಗೀಶ್ ಭಟ್ (54) ಸೆ.8 ರಂದು ಬೆಂಗಳೂರಿನ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದವರು.
ಇವರು ಉಡುಪಿಯ ಎಂಜಿಎಂ ಸಮೀಪದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಆ ಬಳಿಕ ಅಲ್ಲಿಂದಲೂ ಅವರು ತಪ್ಪಿಸಿಕೊಂಡಿದ್ದರು. ಬಳಿಕ ಯೋಗೀಶ್ ಭಟ್ ಅವರ ಮುಂಬೈಯ ಬಾವನಿಗೆ ಮಾಹಿತಿ ನೀಡಿದ್ದರು.
ಅದರಂತೆ ಇನ್ನೊವಾ ಕಾರಿನಲ್ಲಿ ಬಂದ ನಾಲ್ವರಿದ್ದ ತಂಡವು ಯೋಗೀಶ್ ಅವರನ್ನು ಕನಕದಾಸ ರಸ್ತೆಯಲ್ಲಿ ಬಲಾತ್ಕಾರವಾಗಿ ಅಪಹರಿಸಿದ್ದರು. ಅಲ್ಲದೆ ಇವರು ಕಾರಿನಲ್ಲಿ ಬಂದಿರುವುದು ಪಡುಬಿದ್ರೆಯ ಟೋಲ್ ಗೇಟ್ ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಇದೀಗ ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ರೋಗಿಯು ತಪ್ಪಿಸಿಕೊಂಡಿದ್ದ KA04 ನೋಂದಣಿ ಯ ಇನೋವಾ ಕಾರನ್ನು ಪತ್ತೆಹಚ್ಚಿ ರೋಗಿಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.