Thursday, April 25, 2024
spot_imgspot_img
spot_imgspot_img

ಉಡುಪಿ: ಹಾಡುಹಗಲೇ ಬ್ಯಾಂಕ್ ಜಮೆಗಾಗಿ ತಂದಿದ್ದ ಲಕ್ಷಾಂತರ ರೂ. ಹಣ ದರೋಡೆ..!

- Advertisement -G L Acharya panikkar
- Advertisement -

ಉಡುಪಿ: ಕೋರ್ಟ್ ರೋಡ್ ನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಣ ಜಮೆ ಮಾಡಲು ಬಂದಿದ್ದ ಗ್ರಾಹಕರೊಬ್ಬರ ಕೈಯಿಂದ ಕಳ್ಳನೊಬ್ಬ ಹಣ ಎಗರಿಸಿದ ಘಟನೆ ವರದಿಯಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶನಿವಾರ ಗ್ರಾಹಕರೊಬ್ಬರು ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲೆಂದು ಬಂದಿದ್ದಾರೆ.

ಈ ವೇಳೆ ಬ್ಯಾಂಕ್ ಒಳಗೆ ಪ್ರವೇಶಿಸಿದ್ದ ಕಳ್ಳ ಗ್ರಾಹಕರ ಬಳಿ ಇದ್ದ ನಗದು ಬಂಡಲ್ 1.90 ಲಕ್ಷ ರೂಪಾಯಿಗಳನ್ನು ಕಳವು ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆ ಬಳಿಕ ಬ್ಯಾಂಕ್ ಮುಚ್ಚಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!