- Advertisement -
- Advertisement -
ಉಡುಪಿ: ಆರು ಜನ ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಸಾಕಷ್ಟು ಜಾಗೃತರಾಗಿದ್ದಾರೆ.
ಮುಂದೊಂದು ದಿನ ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ಹೊರ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ. ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ ಎಂದು ಯಶ್ ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ.
ಫ್ರಾನ್ಸ್ ಗೂ ಉಡುಪಿಯ ಹಿಜಾಬ್ ವಿಚಾರ ಪ್ರೇರಣೆಯಾಗಿದ್ದು ಖುಷಿಯ ವಿಚಾರ. ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ರಾಜ್ಯ, ರಾಷ್ಟ್ರ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲೂ ಜಾಗೃತಿಗೆ ಕಾರಣವಾಗಿದೆ. ಫ್ರಾನ್ಸ್ ರಾಜಕೀಯ ಪಕ್ಷದ ಪ್ರಣಾಳಿಕೆ ಹಿಜಾಬ್ ಬ್ಯಾನ್ ಮತ್ತು ಹಲಾಲ್ ಬ್ಯಾನ್ ಆಗಿದೆ. ಇದು ಮುಂದೆ ಎಲ್ಲಾ ರಾಷ್ಟ್ರಗಳಲ್ಲೂ ಆಗುತ್ತೆ ಎಂದರು.
- Advertisement -