Saturday, April 20, 2024
spot_imgspot_img
spot_imgspot_img

ಉಪವಲಯ ಅರಣ್ಯಾಧಿಕಾರಿ ವಿರುದ್ದ ಪುತ್ತೂರು ಅರಣ್ಯ ಇಲಾಖೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ; ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸ್ಥಳಕ್ಕೆ ಭೇಟಿ

- Advertisement -G L Acharya panikkar
- Advertisement -
vtv vitla

ಪುತ್ತೂರು: ಭಜನೆ ಮತ್ತು ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದಲ್ಲಿ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ವಿ.ಹಿಂ.ಪ, ಬಜರಂಗದಳದ ವತಿಯಿಂದ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಡಿ.21ರಂದು ನಡೆದ ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಅವರು ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಂಜೀವ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಹಿಂದು ಸಂಘಟನೆ ಪಟ್ಟು ಹಿಡಿದಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಾನತಿನ ಭರವಸೆ ನೀಡಿದರು.

- Advertisement -

Related news

error: Content is protected !!