- Advertisement -
- Advertisement -
ಉಪ್ಪಿನಂಗಡಿ: ಒಮ್ನಿ ಕಾರು ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಆಟೋ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕರಾಯದ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ.
ಆಟೋ ಚಾಲಕ ಬಾರ್ಯ ಗ್ರಾಮದ ಮೂರುಗೋಳಿಯ ನವೀನ್ ತೀವ್ರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಳ್ಯ, ಸಮೀಪದ ಸಂಪಾಜೆಯ ಶ್ರೀಪತಿ ಎಂಬವರು ತಮ್ಮ ಮಗಳನ್ನು ಉಜಿರೆಯ ಖಾಸಗಿ ಕಾಲೇಜಿನ ಪ್ರವೇಶಾತಿಗಾಗಿ ಓಮ್ನಿ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಕರಾಯ ತಿರುವಿನಲ್ಲಿ ಅವಘಾತವಾಗಿದೆ. ಘಟನೆಯಲ್ಲಿ ಓಮ್ನಿಯಲ್ಲಿದ್ದವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -