Friday, April 26, 2024
spot_imgspot_img
spot_imgspot_img

ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಬಸ್‌ ನಿಲ್ಲದ ಕಾರಣ; ವ್ಯಕ್ತಿಯಿಂದ ಬಸ್‌ಗೆ ಕಲ್ಲು ತೂರಾಟ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ ಘಟನೆ ನಡೆದಿದೆ.

ಅಕ್ಟೋಬರ್ 24 ರಂದು ಉಪ್ಪಿನಂಗಡಿಯಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಮದ್ಯದ ಅಮಲಿನಲ್ಲಿದ್ದು ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಬಸ್ ನಿಲ್ಲದೆ ಮುಂದುವರಿದು ಸಾಗಿದಾಗ ಬಳಿಕ ಬಸ್‌ನಿಂದ ಕೆಳಗಿಳಿದ ಕೂಡಲೇ ಬಸ್‌ನ ಗಾಜುಗೆ ಕಲ್ಲು ಎಸೆದು ಹಾನಿ ಮಾಡಿದ್ದಾನೆ. ಇದರಿಂದ ಪ್ರಯಾಣಿಕರೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.

ಕಲ್ಲೆಸೆದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಮಾತುಕತೆಯ ಮೂಲಕ ಈ ಪ್ರಕರಣ ಇತ್ಯರ್ಥಗೊಂಡಿದೆ.

vtv vitla
- Advertisement -

Related news

error: Content is protected !!