Thursday, May 16, 2024
spot_imgspot_img
spot_imgspot_img

ಉಪ್ಪಿನಂಗಡಿ; ತುಳು ಭಾಷೆ ಬಗ್ಗೆ ಪ್ರಾಚಾರ್ಯರು ತುಚ್ಛವಾಗಿ ಮಾತನಾಡಿದ್ದಾರೆಂಬ ಆರೋಪ; ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರೊಬ್ಬರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ. ಪ್ರಾಚಾರ್ಯ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕಳೆದ ಆ.5 ಮತ್ತು ಆ.8ರಂದು ಕನ್ ಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು . ಈ ಸಂದರ್ಭ ಕಾಲೇಜಿನ ಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ವರಾಂಡದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

Related news

error: Content is protected !!