- Advertisement -
- Advertisement -


ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70) ಎಂದು ತಿಳಿದುಬಂದಿದೆ.

ಮುತ್ತಪ್ಪರವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನಪಟ್ಟರೂ ಆದರೆ ಅವರು ಮೃತಪಟ್ಟಿದ್ದರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದುಬಂದಿದೆ.



- Advertisement -








