Tuesday, May 14, 2024
spot_imgspot_img
spot_imgspot_img

ಉಪ್ಪಿನಂಗಡಿ: ಪತ್ರಕರ್ತರ ಮೇಲೆ ಹಲ್ಲೆ; ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮನವಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪೊಲೀಸ್ ಉಪನಿರೀಕ್ಷಕರ ಮುಖಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ ಹಿನ್ನಲೆ ಕಾಲೇಜಿನಲ್ಲಿ ಗುಂಪುಗಾರಿಕೆ ಮತ್ತು ಕೆಲವು ಘಟನೆಗಳು ನಡೆದಿದ್ದು, ಅದರ ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಗಳನ್ನು ಹಿಜಾಬ್ ಪರವಾದ ವಿದ್ಯಾರ್ಥಿಗಳು ಕೋಣೆಯಲ್ಲಿ ಕೂಡಿಹಾಕಿದ್ದು, ಅಷ್ಟೇ ಅಲ್ಲದೇ ಕ್ಯಾಮರಾವನ್ನು ಬಲವಂತವಾಗಿ ಕಸಿದು ಮಾಧ್ಯಮದವರು ಮಾಡಿರುವ ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ.

ಇದು ಪತ್ರಿಕಾ ಸ್ವಾತಂತ್ರ್ಯದ ಹರಣವಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಈ ರೀತಿ ಅನ್ಯಾಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ ಹಾಗೂ ಇಂತಹ ಕೃತ್ಯವನ್ನು ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಉಪ್ಪಿನಂಗಡಿ: ಮಾಧ್ಯಮ ಪ್ರತಿನಿಧಿಗಳ ಮೇಲೆ ಮುಸ್ಲಿಂ ವಿದ್ಯಾರ್ಥಿಗಳ ಗೂಂಡಾಗಿರಿ

- Advertisement -

Related news

error: Content is protected !!