- Advertisement -
- Advertisement -
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗದು ಸಹಿತ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ.
ಉರುವಾಲು ಪದವು ನಿವಾಸಿ ಹಮೀದ್ ಎಂಬವರು ತನ್ನ ಪತ್ನಿ ಮಕ್ಕಳೊಂದಿಗೆ ನೆಲ್ಯಾಡಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ವೇಳೆ ಕಳ್ಳರು ಮನೆಯೊಳಗಿದ್ದ ಕವಾಟಿನ ಬೀಗ ಮುರಿದು ನೆಕ್ಲೇಸ್, ಎರಡು ಉಂಗುರ ಸೇರಿದಂತೆ ಆರು ಪವನ್ ತೂಕದ ಚಿನ್ನಾಭರಣವನ್ನು ಹಾಗೂ ಸ್ವಲ್ಪ ನಗದು ಹಣವನ್ನು ದೋಚಿದ್ದಾರೆ.
ಪರಿಸರದಲ್ಲಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಭಿಕ್ಷಾಟನೆ ನೆಪದಲ್ಲಿ ಸಂಚರಿಸುತ್ತಿದ್ದ ಅಲೆಮಾರಿ ತಂಡದ ಮೇಲೆ ಸಂಶಯ ಮೂಡಿದ್ದು, ಸದ್ರಿ ತಂಡವನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -