- Advertisement -
- Advertisement -
ಉಪ್ಪಿನಂಗಡಿ : 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ.
ಬೆಳಗ್ಗೆ 8 ರಿಂದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ಕಂಬಳಾಭಿಮಾನಿಗಳು, ಕಂಬಳ ಕೋಣಗಳ ವೈಭವದ ಮೆರವಣಿಗೆಯು ಕಂಬಳ ಕರೆಯವರೆಗೆ ನಡೆಯಲಿದ್ದು , ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
- Advertisement -