Saturday, May 11, 2024
spot_imgspot_img
spot_imgspot_img

ಉಪ್ಪಿನಂಗಡಿ: ಮೀನಿನ ಅಂಗಡಿ ದ್ವಂಸ ಪ್ರಕರಣ; ಹಿಂ.ಜಾ.ವೇ.ಯಿಂದ ಆರೋಪಿಗಳ ಪತ್ತೆಗಾಗಿ ಠಾಣೆಯ ಮುಂಭಾಗ ಬೃಹತ್‌ ಧರಣಿ ಸತ್ಯಾಗ್ರಹ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದು ಇನ್ನೂ ನೈಜ ಆರೋಪಿಗಳನ್ನು ಬಂಧಿಸದ ಹಿನ್ನೆಲೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಇಂದು ಉಪ್ಪಿನಂಗಡಿ ಠಾಣೆಯ ಮುಂಭಾಗ ಬೃಹತ್‌ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ.

ಠಾಣೆಗೆ ತೆರಳುವ ದಾರಿ ಮಧ್ಯದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಕಾರರನ್ನು ತಡೆದಿದ್ದು, ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಬ್ಯಾರಿಕೇಡ್ ಅನ್ನು ಸರಿಸಿ ಪೊಲೀಸ್ ಠಾಣೆಯ ಕಡೆಗೆ ತೆರಳಲು ಪ್ರತಿಭಟನಕಾರರಿಗೆ ಅವಕಾಶ ಕಲ್ಪಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಮುಖಂಡರು ಹಾಗೂ ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.

- Advertisement -

Related news

error: Content is protected !!